ಸ್ಥಳೀಯ ಸುದ್ದಿ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗಾಗಿ ಪ್ರತಿಭಟನೆ

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬ ವರ್ಗದವರಿಗೆ ಸರ್ಕಾರ ಜಾರಿ ಮಾಡಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಮಗೂ ಕೂಡ ಜಾರಿ ಮಾಡಿಕೊಡಿ‌ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಅಧಿಕಾರಿ ವೃಂದದವರು ಪ್ರತಿಭಟನೆ ನಡೆಸಿದ್ರು.

ಅವಳಿ ನಗರದಲ್ಲಿ ಧಾರವಾಡ ಹಾಗೂ ಹುಬ್ಬಳ್ಳಿ ಪಾಲಿಕೆ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಪೌರ ಕಾರ್ಮಿಕರು ಹಾಗೂ ಪಾಲಿಕೆ ಸಿಬ್ಬಂದಿಯವರು, ಕೋವಿಡ್ ಕಷ್ಟಕಾಲದಲ್ಲಿ ಕೆಲಸ ಮಾಡುತ್ತಿರುವ ನಮಗೆಲ್ಲಾ ಈ ಯೋಜನೆಯನ್ನ ಜಾರಿಮಾಡಿದ್ರೆ ಅನುಕೂಲವಾಗುತ್ತೆ ಎಂದು ಒತ್ತಾಯ ಮಾಡಿದ್ರು..

Related Articles

Leave a Reply

Your email address will not be published. Required fields are marked *

Back to top button