ಸ್ಥಳೀಯ ಸುದ್ದಿ
ಡಾ.ಕೆ. ಅರುಣ್ ದಾವಣಗೆರೆ ಜಿಲ್ಲೆಯ ನೂತನ ಎಸ್ಪಿ
![](https://www.powercity.news/wp-content/uploads/2023/04/IMG-20230424-WA0002.jpg)
ದಾವಣಗೆರೆ
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
![](https://powercity.news/wp-content/uploads/2023/04/IMG_20230423_203055-1.jpg)
ಇದುವರೆಗೆ ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನ ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿದೆ. ಆದರೆ, ರಿಷ್ಯಂತ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.
ಈ ಹಿಂದೆ ವಿಜಯನಗರ ಜಿಲ್ಲೆಯ ರಕ್ಷಣಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಡಾ. ಅರುಣ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗುವ ಮುನ್ನ ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.