ಧಾರವಾಡ
ಧಾರವಾಡದ ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ಇನ್ನು ನೆನಪು ಮಾತ್ರ
![](https://www.powercity.news/wp-content/uploads/2021/11/IMG-20211111-WA0022.jpg)
ಧಾರವಾಡ
ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ.
ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ.
![](http://powercity.news/wp-content/uploads/2021/11/IMG-20211111-WA0023.jpg)
ಧಾರವಾಡದ ಕೆಲಗೇರಿಯ ನಿವಾಸಿ ಪಂ. ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.