ಸ್ಥಳೀಯ ಸುದ್ದಿ
ಪತ್ರಕರ್ತನ ಬಂಧನಕ್ಕೆ ಖಂಡನೆ- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ
![](https://www.powercity.news/wp-content/uploads/2023/03/IMG-20230329-WA0030.jpg)
ಧಾರವಾಡ
ಬಿಟಿವಿಯ ಹಿರಿಯ ವರದಿಗಾರ ಮೆಹಬೂಬ ಮುನವಳ್ಳಿ ಬಂಧನ ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಿದ್ರು.
![](https://powercity.news/wp-content/uploads/2023/03/IMG-20230329-WA0030.jpg)
![](https://powercity.news/wp-content/uploads/2023/03/IMG-20230329-WA0042.jpg)
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಲೋಚನೇಶ ಹೂಗಾರ ನೇತೃತ್ವದಲ್ಲಿ ಪದಾಧಿಕಾರಿಗಳು ಈ ಪ್ರತಿಭಟನೆ ನಡೆಸಿದ್ರು.
ನಗರದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ಸಾಗಿ,
ಪ್ರಜಾಪ್ರಭುತ್ವದ 4 ನೇ ಅಂಗವಾದ ಮಾಧ್ಯಮ ರಂಗದಲ್ಲಿರುವವರನ್ನು ಪೊಲೀಸರು ಬಂಧನ ಮಾಡುತ್ತಿರುವುದು ಖಂಡನೀಯ. ಇದರಿಂದ ಪತ್ರಕರ್ತರ ಹಕ್ಕು ಕಸಿದುಕೊಂಡಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಡೆದ ಈ ಪ್ರತಿಭಟನೆಯಲ್ಲಿ
ದಾವಣಗೇರಿ ಪೊಲೀಸ್ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕಾಗಿ ಹಾಗೂ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು.
ತಹಶಿಲ್ದಾರ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.