ಸ್ಥಳೀಯ ಸುದ್ದಿ

ಭೀಕರ ರಸ್ತೆ ಅಪಘಾತ ಇಬ್ಬರು ಸಾವು- ಇನ್ನಿಬ್ಬರಿಗೆ ಗಂಭೀರ ಗಾಯ

ಧಾರವಾಡ

vrl ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಗೂಡ್ಸ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಭೀಕರ ರಸ್ತೆ ಅಪಘಾತವಾಗಿದೆ.

ಈ ಅಪಘಾತದಲ್ಲಿ ಸ್ಥಳದಲ್ಲೇ ವಿಆರಎಲ್ ಚಾಲಕ ಹಾಗೂ ಅಶೋಕ ಲೈಲ್ಯಾಂಡ್ ವಾಹನ ಚಾಲಕ ಮೃತಪಟ್ಡಿದ್ದಾನೆ.

ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಕಾಲು ಕಟ್ ಆಗಿದೆ. ಅವರನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ಚಿಕೆತ್ಸೆಗೆ ರವಾನೆ ಮಾಡಲಾಗಿದೆ.

ಧಾರವಾಡ ತಾಲೂಕಿನ ಹಾರೊಬೆಳವಡಿ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತರಾದವರ ಪೈಕಿ ಸವದತ್ತಿ ತಾಲೂಕಿನ ಉಳ್ಳಿಗೇರಿಯ ಗ್ರಾಮದ ಒಬ್ಬರು ಇದ್ದು, ವಿಆರಎಲ್ ಲಾರಿ ಚಾಲಕನ ಮಾಹಿತಿ ತಿಳಿದು ಬಂದಿಲ್ಲಾ.

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ‌ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button