ಧಾರವಾಡರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ಕಾನೂನು ಅರಿವು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿದ ಹೈಕೋರ್ಟ್ ನ್ಯಾಯಾಧೀಶರು

ಧಾರವಾಡ

ಧಾರವಾಡ ವಕೀಲರ ಸಂಘದ ಸಭಾಭವನದಲ್ಲಿ 75 ನೇ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25 ನೇ ವರ್ಷಾಚರಣೆ ನಿಮಿತ್ಯ ಕಾನೂನು ಅರಿವು-ನೆರವು ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು.ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನೀಲ ದತ್ತ ಯಾದವ ಅವರು ಈ ಕಾರ್ಯಕ್ರಮ ಉದ್ಘಾಟಿಸಿದ್ರು.

ಇದೇ ಸಂದರ್ಭದಲ್ಲಿ ಜಾಗೃತಿ ಅಭಿಯಾನದ ವಾಹನಕ್ಕೆ ಚಾಲನೆ ಕೊಡಲಾಯಿತು.

ನಂತರ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಅಡಿಗ , ನ್ಯಾಯಾಧೀಶೆ ಪುಷ್ಪಲತಾ ಅವರು ಸೇರಿದಂತೆ ಇತರೆ ನ್ಯಾಯಾಧೀಶರು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button