ಧಾರವಾಡ

ಕಣವಿ ಅಜ್ಜ ಇನ್ನು ನೆನಪು ಮಾತ್ರ

ಧಾರವಾಡ

ಕಳೆದ ತಿಂಗಳು ಕೊರೊನಾ ಪಾಸಿಟಿವ್ ಆಗಿ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಾಗಿದ್ದ ಚೆಂಬೆಳಕಿನ ಕವಿ.ಡಾ.ಚೆನ್ನವೀರ ಕಣವಿ ಅವರು ಇಂದು ನಿಧನರಾಗಿದ್ದಾರೆ.

1 ತಿಂಗಳು 3 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ
ದಿನದಿಂದ ದಿನಕ್ಕೆ ಕ್ರಿಟಿಕಲ್ ಆಗುತ್ತಾ ಹೋಗಿತ್ತು.
ನಿನ್ನೆಯಷ್ಟೆ ಹೆಲ್ತ ಬುಲೆಟಿನ್ ಬಿಡುಗಡೆ ಮಾಡಿದ್ದ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕಂಡಿಶನ್ ತಿಳಿಸಲಾಗಿತ್ತು.

ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಕಲ್ಯಾಣನಗರದ ಮನೆಗೆ ತಂದು, ನಂತರ ಕೆಸಿಡಿ‌ ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಧಾರವಾಡದ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ್ದಾರೆ ಕವಿ.ನಾಡೋಜ ಡಾ.ಚೆನ್ನವೀರ ಕಣವಿ ಅವರು.

ಇವರ ಮಗ ಖ್ಯಾತ ಕ್ರಿಕೇಟ್ ಕಮೆಂಟೆಟರ್ ಚಂದ್ರಮೌಳಿ ಕಣವಿ.

ನಿನ್ನೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿರುವ ಡಾ.ಚೆನ್ನವೀರ ಕಣವಿ ಅವರನ್ನು ನೋಡಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕರ ಅರವಿಂದ ಬೆಲ್ಲದ ಅವರು ಹೋಗಿದ್ದರು.

ಡಾ. ಚೆನ್ನವೀರ ಕಣವಿ ಅವರ ಬಯೋಗ್ರಾಫಿ ನೋಡುವುದಾದರೆ..

ಚನ್ನವೀರ ಕಣವಿ..
ವಯಸ್ಸು 94
ಜನನ 28-6-1928
ಜನ್ಮ ಗದಗ ತಾಲೂಕಿನ ಹೊಂಬಳ ಗ್ರಾಮ
ತಂದೆ ಸಕ್ಕರೆಪ್ಪ, ತಾಯಿ ಪಾರ್ವತವ್ವ
ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು
ಆರಂಭದಲ್ಲಿ ಗದಗ ತಾಲೂಕಿನ ಶಿರುಂದದಲ್ಲಿ ಶಿಕ್ಷಕರಾಗಿದ್ದ ತಂದೆ, ಹೀಗಾಗಿ ಶಿರುಂದದಲ್ಲಿಯೇ ಬಾಲ್ಯ ಕಳೆದ ಕಣವಿ
ನಾಲ್ಕನೇ ತರಗತಿವರೆಗೆ ಶಿರುಂದದಲ್ಲಿಯೇ ಶಿಕ್ಷಣ
ಬಳಿಕ ಧಾರವಾಡ ತಾಲೂಕಿನ ಗರಗ ಶಾಲೆಯಲ್ಲಿ 7ನೇ ತರಗತಿವರೆಗೆ ಶಿಕ್ಷಣ
ಬಾಲ್ಯದಲ್ಲಿ ಗಾಂಧಿ ಟೋಪಿ ನಾಟಕದಲ್ಲಿ ಅಭಿನಯಿಸಿದ್ದ ಕಣವಿ
ಮುಲ್ಕಿ ಪರೀಕ್ಷೆಯಲ್ಲಿ ಧಾರವಾಡ ಕೇಂದ್ರಕ್ಕೆ ಪ್ರಥಮ ಸ್ಥಾನ
ಧಾರವಾಡದ ಆರ್ಎಲ್ಎಸ್ನಲ್ಲಿ ಹೈಸ್ಕೂಲ್ ಶಿಕ್ಷಣ
ಧಾರವಾಡದ ಮುರುಘಾಮಠದಲ್ಲಿದ್ದುಕೊಂಡು ಹೈಸ್ಕೂಲ್ ಶಿಕ್ಷಣ
ಕರ್ನಾಟಕ ಕಾಲೇಜ್ನಲ್ಲಿ ಬಿಎ ಶಿಕ್ಷಣ
ಕಾಲೇಜ್ ವಿದ್ಯಾರ್ಥಿಯಾಗಿದ್ದಾಗ ಕಣವಿಯವರ ಕವನಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಹಾರೈಸಿದ್ದ ಡಿವಿಜಿ
ಧಾರವಾಡದ ಮಾಳಮಡ್ಡಿಯಲ್ಲಿ ಕಾವ್ಯಾನುಭವ ಮಂಪಟ ಆರಂಭಿಸಿ ಕವಿತಾ ವಾಚನ ಅಭಿಯಾನ ನಡೆಸಿದ್ದ ಹಿರಿಯ ಕವಿ
1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ
ಅದೇ ಕವಿವಿಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಆರಂಭ
ಬಳಿಕ 1956ರಲ್ಲಿ ಅದೇ ಪ್ರಸಾರಾಂಗ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ
ಪತ್ನಿ ಶಾಂತಾದೇವಿ ಕೂಡ ಸಾಹಿತಿ, ಕನ್ನಡದ ಖ್ಯಾತಿ ಕತೆಗಾರ್ತಿ
ಇತ್ತೀಚೆಗೆ ನಿಧನರಾಗಿದ್ದ ಪತ್ನಿ ಶಾಂತಾದೇವಿ
ಪತ್ನಿ ನಿಧನದ ಬಳಿಕ ಸ್ವಲ್ಪ ಲವಲವಿಕೆ ಕಳೆದುಕೊಂಡಿದ್ದ ಕಣವಿ
ವಿಶ್ವಭಾರತಿಗೆ ಕನ್ನಡದಾರತಿ…, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ…, ಹೂವು ಹೊರಳುವುವು ಸೂರ್ಯನ ಕಡೆಗೆ…, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ… ಜನಪ್ರಿಯ ಕಾವ್ಯಗಳು
ಕವನ ಸಂಕಲನ
ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನ ಪ್ರಕಟ

ವಿಮರ್ಶಾ ಕೃತಿಗಳು:
ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ವಿಮರ್ಶಾತ್ಮಕ ಕೃತಿಗಳು
ಮಕ್ಕಳ ಕೃತಿ:
ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಕವನ ಸಂಕಲನ

ಪ್ರಶಸ್ತಿ ಮತ್ತು ಪುರಸ್ಕಾರಗಳು
1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ
2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ
ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,
ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ,
ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಕೊಡಲಾಗಿತ್ತು.

ಇಳಿವಯಸ್ಸಿನಲ್ಲೂ ಯುವಕರೆಲ್ಲರೂ ನಾಚುವಂತೆ ಆರೋಗ್ಯ ಕಾಪಾಡಿಕೊಂಡಿದ್ದ ಕಣವಿ ಅಜ್ಜ ಬಾರದ ಲೋಕಕ್ಕೆ ಹೋಗಿದ್ದು ನಮಗೆಲ್ಲಾ ದುಃಖದ ಸಂಗತಿ.‌

ಅವರ ಕುಟುಂಬಕ್ಕೆ ಆ ದೇವರು‌ ದು:ಖ ಭರಿಸುವ ಶಕ್ತಿ ಕೊಡಲಿ.

ವಿ ಮಿಸ್ ಯು ಕಣವಿ ಅಜ್ಜ ….

Related Articles

Leave a Reply

Your email address will not be published. Required fields are marked *

Back to top button