BELAGAVIBHAIRATI SURESHBody buildersSand MafiyaSportsTechTWINCITYUT KHADARರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ಇನ್ಸ್ಪೆಕ್ಟರ್ ನಿಂದ ಹಣಕ್ಕಾಗಿ ಕಿರುಕುಳದ ಆರೋಪ ಲೋಕಾಯುಕ್ತ ಪೋಲಿಸ್ ಎಂಟ್ರಿ ಆರೋಪಿ ಎಸ್ಕೇಪ್!

DAKHANI

POWER CITY NEWS :BANGALORE/ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಕಿರುಕುಳ ನೀಡಿದ ಆರೋಪ ಮೇಲೆ ಸಿಎಂ ಚಿನ್ನದ ಪದಕಕ್ಕೆ ಭಾಜನಾರಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ, ಇನ್ಸ್‌ಪೆಕ್ಟರ್‌ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.

ಆರೋಪದ ಹಿನ್ನೆಲೆ?
ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್‌ಪೆಕ್ಟರ್‌ ಕುಮಾರ್ (INCEPECTOR)ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಬಲವಾಗಿ ಕೆಳಿಬಂದಿದ್ದಲ್ಲದೆ.ಗುತ್ತಿಗೆದಾರ ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದುದರಿಂದ , ಚೆನ್ನೆಗೌಡ ದಂತಿಗಳಿಬ್ಬರಿಗೂ ಇನ್ಸ್‌ಪೆಕ್ಟರ್‌ 9POLICE)ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿಂದೆ ದಾಖಲಾಗಿದ್ದ ಕೇಸ್ ಒಂದನ್ನು” ಬಿ” ರಿಪೋರ್ಟ್‌ಗೆ ಹಾಕುತ್ತೇನೆ(COMPLAINT) ಎಂದು ಭರವಸೆ ನಿಡಿದ್ದರು ಎನ್ನಲಾಗಿದೆ. ಇ ಹಿನ್ನೆಲೆಯಲ್ಲಿ ಹಣ ಕೊಡಲಾಗದಿದ್ದರೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್‌ ಕುಮಾರ್ ಅವರು ಚೆನ್ನೇಗೌಡ(CHANNEGOUDA) ಅವರ ಮನೆಗೆ ಕೆಲ ಪುಂಡರನ್ನ(ROWDY) ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ಅವರು ವಿಡಿಯೋ (VEDIO)ಮಾಡಿಕೊಂಡಿದ್ದರು.

ಪೊಲೀಸ್ ಇನ್ಸ್‌ಪೆಕ್ಟರ್‌, ಸಂಬಂಧಿಯೊಬ್ಬರಿಗೆ ಕಡಿಮೆ ಬೆಲೆಗೆ ಮನೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. 4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ(SXTYLAKH) ಕೊಡುವಂತೆ ಚೆನ್ನೇಗೌಡ ದಂಪತಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮನೆ ನೋಡಿಕೊಂಡು ಬರಲು ಠಾಣೆಯ ಹೆಡ್ ಕಾನ್ಸ್‌ಟೇಬಲ್(CONSTAIBLE) ಉಮೇಶ್ ಅವರ ಜೊತೆ ಅವರ ಸಂಬಂಧಿಕರನ್ನ ಕಳುಹಿಸಿದ್ದರು.

ಇನ್ಸ್‌ಪೆಕ್ಟರ್‌ ಸೂಚನೆಯಂತೆ(DIRECTION) ಇಬ್ಬರು ವ್ಯಕ್ತಿಗಳೊಂದಿಗೆ ಮನೆ ನೋಡಬೇಕೆಂದು ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರು ಚೆನ್ನೇಗೌಡ ಅವರ ಮನೆಗೆ ನುಗ್ಗಿದ್ದರು. ಮಾ. 18ರಂದು ಸಮಯ 3:25 ನಿಮಿಷಕ್ಕೆ ಕೆಂಪು ಬಣ್ಣದ ಕೆಎ 42 ಪಿ 0919 ನೋಂದಣಿಯ ಬ್ರೀಝಾ ಕಾರಿನಲ್ಲಿ(BREZZA CAR) ಮನೆಗೆ ಬಂದಿದ್ದರೆನ್ನಲಾಗಿದೆ.

ಈ ಬಗ್ಗೆ ಪ್ರಶ್ನಿಸಿದ ಚೆನ್ನೇಗೌಡ ಅವರು ವಿಡಿಯೋ ಸಹ ಮಾಡಿದ್ದರು. ಈ ವೇಳೆ ಸ್ಟೇಷನ್‌ನಿಂದ (POLICE STATION) ಕಾರು ಸಮೇತ ಕರೆದುಕೊಂಡು ಬರುವುದಾಗಿ ಹೇಳಿದ್ದಾರೆ ಎಂದು ಹೆಡ್ ಕಾನ್ಸ್ಟೇಬಲ್ ಉಮೇಶ್ ಅವರು ಅಲ್ಲಿಂದ ಎಸ್ಕೇಪ್ ಆಗಿದ್ದರು ಎಂದು ಆರೋಪಿಸಲಾಗಿದೆ.

ಮತ್ತೊಂದಡೆ ನಾಗರಭಾವಿಯ ಖಾಸಗಿ ಹೊಟೇಲ್‌ನಲ್ಲಿ ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾ ದಾಳಿ ನಡೆಸಿದೆ. ಹೆಡ್ ಕಾನ್ಸ್‌ಟೇಬಲ್ ಉಮೇಶ್, ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ(ARREST). ಲೋಕಾಯುಕ್ತ ಅಧಿಕಾರಿಗಳು ಠಾಣೆಯ ಸಿಬ್ಬಂದಿಗಳನ್ನ ಹಾಗೂ ಸಿಕ್ಕಿಬಿದ್ದ ಸಿಬ್ಬಂದಿಗಳನ್ನು ಗುರುವಾರ(THURSDAY)ಸಂಜೆ 5 ಗಂಟೆಯಿಂದ ಬೆಳಗಿನ ಜಾವದವರೆಗೆ ವಿಚಾರಣೆ ನಡೆಸಿದ್ದು, ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

Related Articles

Leave a Reply

Your email address will not be published. Required fields are marked *