ಕ್ಷಣಿಕ ಖ್ಯಾತಿಯ ಹಿಂದೆ ಓಡಿದರೆ,ಜೀವನದ ನಿಜವಾದ ಗುರಿ ಕೈ ತಪ್ಪುತ್ತದೆ:ಸುರೇಶ ಗೋಕಾಕ!
Dakhani

POWER CITYNEWS: HUBBALLI/ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯರಲ್ಲಿ ದುಷ್ಟ ಚಟಗಳು, ಕೆಟ್ಟ ಸಹವಾಸ ಹಾಗೂ ಸಾಮಾಜಿಕ ಜಾಲತಾಣಗಳ (Social Media) ದುರುಪಯೋಗ ಗಣನೀಯವಾಗಿ ಹೆಚ್ಚುತ್ತಿರುವುದು ಸಮಾಜದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ತಕ್ಷಣ ಎಚ್ಚೆತ್ತುಕೊಂಡು, ವ್ಯಾಪಕ ಜಾಗೃತಿ ಮೂಡಿಸುವುದರ ಜೊತೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಳೆದ ಐದಾರೂ ದಿನಗಳಿಂದ ಧಾರವಾಢ ಜಿಲ್ಲೆಯತ್ತ ಪ್ರವಾಸ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಗೆ ಕಾರ್ಯಕ್ರಮವನ್ನುದ್ದೇಶಿಸಿ ಭೇಟಿ ನೀಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಯವರನ್ನು ಭೇಟಿ ಮಾಡಿದ ಹುಬ್ಬಳ್ಳಿಯ ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ ಅಭಿಮಾನಿಬಳಗದ ರಾಜ್ಯಾಧ್ಯಕ್ಷ ಸುರೇಶ ಗೋಕಾಕ ಅಧ್ಯಕ್ಷರನ್ನು ಭೇಟಿಯಾಗಿ ಅವಳಿನಗರದ ಸಾರ್ವಜನಿಕ ಹಾಗೂ ಪೋಷಕರ ಪರವಾಗಿ ಮನವಿ ಸಲ್ಲಿಸಿದರು.
ಸಾರ್ವಜನಿಕರು ಹಾಗೂ ಮುಖಂಡರ ಪ್ರಮುಖ ಬೇಡಿಕೆಗಳು:
”ಸೈಬರ್ ಅಸ್ತ್ರ, ಜಾಗೃತಿಯ ನಡೆ: ಹಾದಿ ತಪ್ಪುವ ಯುವಕರಿಗೆ ಬೇಕಿದೆ ಕಠಿಣ ಕಾನೂನಿನ ಹೆಡೆ!”
ಕಠಿಣ ಕಾನೂನು ಕ್ರಮ: ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ, ಧೂಮಪಾನ ಹಾಗೂ ಮದ್ಯಪಾನ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಸೈಬರ್ ಕಾನೂನು ಅಸ್ತ್ರ: ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಕಂಟೆಂಟ್ಗಳನ್ನು ಹರಡುವವರ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಜಾಗೃತಿ ಕಾರ್ಯಕ್ರಮಗಳು: ಶಾಲೆ, ಕಾಲೇಜು ಹಾಗೂ ಗ್ರಾಮೀಣ-ನಗರ ಮಟ್ಟದಲ್ಲಿ ಜಾಗೃತಿ ಅಭಿಯಾನಗಳನ್ನು ಆಯೋಜಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಬೇಕು.
ಪೋಷಕರ ಜವಾಬ್ದಾರಿ: ಕೇವಲ ಸರ್ಕಾರದ ಮೇಲಷ್ಟೇ ಜವಾಬ್ದಾರಿ ಹಾಕದೆ, ಪೋಷಕರು ಸಹ ತಮ್ಮ ಮಕ್ಕಳ ದಿನನಿತ್ಯದ ಚಟುವಟಿಕೆಗಳ ಮೇಲೆ ನಿಗಾವಹಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖಂಡರು ಸಲಹೆ ನೀಡಿದ್ದಾರೆ.
ಕೊನೆಯ ಮಾತು: ಯುವ ಪೀಳಿಗೆಯ ಉತ್ತಮ ಭವಿಷ್ಯ, ಸಮಾಜದ ಒಳಿತು ಹಾಗೂ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯ ದೃಷ್ಟಿಯಿಂದ ಸರ್ಕಾರ ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ವಿನಮ್ರವಾಗಿ ವಿನಂತಿಸಿದ್ದಾರೆ.



