ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಕೇಸಗಳು ಹೆಚ್ಚಳ ಮೈಸೂರು ಜಾತ್ರೆ ರದ್ದು

ಮೈಸೂರು

ಕೊರೊನಾ ಕೇಸಗಳು ರಾಜ್ಯದಲ್ಲಿ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಜಾತ್ರೆಗಳನ್ನು ರದ್ದು ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಪ್ರಕಾರ ಮೈಸೂರು ಜಿಲ್ಲೆಯ ನಂಜನಗೂಡಿನ ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ಜಾತ್ರೆ ರದ್ದು ಮಾಡಿ, ಜಾತ್ರಾ ಮಹೋತ್ಸವ ಸಮಿತಿ ಪ್ರಕಟಣೆ ಹೊರಡಿಸಿದೆ.

ಇದೇ ಜನೇವರಿ 28 ರಿಂದ ಫೆಬ್ರವರಿ 2 ರ ವರೆಗೆ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಡೆಯಬೇಕಿತ್ತು.

ಜಾತ್ರೆ ರದ್ದು ಮಾಡಿದ ಕಾರಣ ಭಕ್ತಾದಿಗಳು ಸಹಕರಿಸಿ, ದೇವಸ್ಥಾನಕ್ಕೆ ಬರಬಾರದು.

ಭಕ್ತಾದಿಗಳು ದೇವಸ್ಥಾನಕ್ಕೆ ಬಾರದೇ ಆನಲೈನಲ್ಲಿ ದೇವಸ್ಥಾನದಲ್ಲಿ
ಸಾಂಕೇತಿಕ ಧಾರ್ಮಿಕ ಆಚರಣೆಗಳನ್ನು ವೀಕ್ಷಿಸಬಹುದಾಗಿದೆ ಎಂದು ದೇವಸ್ಥಾನದ ಜಾತ್ರಾ ಮಹೋತ್ಸವದ ಸಮಿತಿಯ ಕಾರ್ಯದರ್ಶಿಯಾಗಿರುವ ಎಸ್.ಶಿವಕುಮಾರ ಸ್ವಾಮಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button