DHARWADHubballiKalghatagi

ಸತ್ಯದ ಮತ್ತೊಂದ ರೂಪವೆ ಮಹಾತ್ಮಾ ಗಾಂಧೀಜಿ:ಸಚಿವ ಸಂತೋಷ್ ಲಾಡ್!

ಧಾರವಾಡ:ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ನಿಮಿತ್ತ ಗಾಂಧಿ ಭಜನೆ, ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗಾಂಧೀಜಿಯನ್ನು ಶಾಂತಿ ಅಹಿಂಸೆಗಳ ಹರಿಕಾರ, ಸತ್ಯದ ಸರದಾರ, ಭಾರತ ದೇಶದ ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಇವರ ಮುಖ್ಯ ತತ್ವದಲ್ಲಿ ಸತ್ಯ ಸಹ ಒಂದು. ನಿಜ ಅಥವಾ ಸತ್ಯದ ಪರಿಶೋಧನೆ ಎಂಬ ವಿಸ್ತೃತ ಉದ್ದೇಶಕ್ಕಾಗಿ ಗಾಂಧೀಜಿಯವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ತಮ್ಮ ತಪ್ಪುಗಳಿಂದಲೇ ಕಲಿತು, ತಮ್ಮ ಜೀವನದ ಮೇಲೆಯೇ ಪ್ರಯೋಗಗಳನ್ನು ಮಾಡಿಕೊಂಡು ಸತ್ಯದ ಮಾರ್ಗವನ್ನು ಸಾಧಿಸಲು ಪ್ರಯತ್ನಿಸಿದವರು ಎಂದರು.

Related Articles

Leave a Reply

Your email address will not be published. Required fields are marked *

Back to top button