ಮಹಾದಾಯಿ”ಗಾಗಿ ಸುಪ್ರೀಂಕೋರ್ಟ್ ಮೆಟ್ಟಲೇರಿದ ಸೋಬರದ ಮಠ!
POWER CITY

POWER CITY NEWS: HUBLI/ಹುಬ್ಬಳ್ಳಿ: ಮಹದಾಯಿ ಹೋರಾಟ ಇಂದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ(twincity) ಅವಳಿನಗರದ ಜನರ ಕುಡಿಯುವ ನೀರಿನ ಬವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆ ಕುರಿತಾದ ವರದಿ ಇಲ್ಲಿದೆ ನೋಡಿ…
ಉತ್ತರ ಕರ್ನಾಟಕದ (northkarnataka)ಬಹುದೊಡ್ಡ ಬೇಡಿಕೆಯಾದ ಕಳಸಾ ಬಂಡೂರಿ ನಾಲಾ ಜೋಡಣೆ ಹಾಗೂ ಮಹಾದಾಯಿ ವಿಚಾರವಾಗಿ ನಿರಂತರ ಧರಣಿ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಹಾಗೂ ರೈತ ಸೇನೆಯ ಮುಖಂಡರಾದ ವೀರೇಶ ಸೊಬರದಮಠ(sobaradamath) ಅವರ ನೇತೃತ್ವದಲ್ಲಿ ಇದೀಗ ಸುಪ್ರೀಂ ಕೋರ್ಟ್ ನಲ್ಲಿ(supremecourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದೆ.

ಈಗಾಗಲೇ ನೀಡಿರುವ ನ್ಯಾಯಾಧೀಕರಣದ ತೀರ್ಪಿ ನಂತೆ ಕಾಲುವೆಗೆ ನೀರು ಹರಿಸಲು ಬೇಕಾದ ಅನುಮತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೇಳಿಕೊಂಡಿದೆ. ಅಲ್ಲದೇ, ಅನುಮತಿ ಕೊಡದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದೆ.
ಈ ನಡುವೆ ಮಹದಾಯಿ ನೀರಿಗಾಗಿ ಕೇಂದ್ರ(centralminister) ಸರ್ಕಾರದ ವಿರುದ್ಧ ರಾಷ್ಟ್ರಪತಿ ಭವನದ ಎದುರು ಪರೇಡ್(pared) ನಡೆಸಲೂ ರೈತ ಸೇನೆ ಕರ್ನಾಟಕ ಚಿಂತನೆ ನಡೆಸಿದೆ.

ಇನ್ನೂ ಮಹದಾಯಿ ನೀರು ಹಂಚಿಕೆ ಕುರಿತಂತೆ 2018ರಲ್ಲೇಇನ್ನೂ ಮಹದಾಯಿ ನೀರು ಹಂಚಿಕೆ ಕುರಿತಂತೆ 2018ರಲ್ಲೇ ನ್ಯಾಯಾಧೀಕರಣ ತೀರ್ಪು ನೀಡಿದೆ. ಕೇಂದ್ರ ಸರ್ಕಾರವೂ ಅದಕ್ಕೆ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಿದೆ. ಆದರೆ, ಈವರೆಗೂ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಅನುಮತಿ ಸಿಗುತ್ತಿಲ್ಲ. ಇದಕ್ಕೆ ಸೂಕ್ತ ಕಾರಣ ಕೇಂದ್ರ ಸರ್ಕಾರ ಕೊಡುತ್ತಿಲ್ಲ.(PIL) ಮಹದಾಯಿಯಲ್ಲಿ ನಿರ್ಲಕ್ಷ್ಯ ತೋರಿದ ಈ ಭಾಗದ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ ಮಹದಾಯಿ ಯೋಜನೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದೆ. ರಾಜ್ಯ ಸರ್ಕಾರದಿಂದ ಸಲ್ಲಿಸಬೇಕಾದ ದಾಖಲೆಗಳನ್ನೆಲ್ಲ ಕೊಟ್ಟಿದೆ. ಆದರೂ ಅನುಮತಿ ಏಕೆ ಕೊಡುತ್ತಿಲ್ಲ ಎಂಬುದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಸಲ್ಲಿಸಲಾಗಿದೆ.